
ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ೩೦ ಕ್ವಿಂಟಾಲ್ ಭತ್ತಕ್ಕೆ ಬೆಂಕಿ ತಗಲಿ ಸಂಪೂರ್ಣ ಭಸ್ಮವಾಗಿದೆ.
ಸುದ್ಧಿ ತಿಳಿದ ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸೈಯ್ಯದ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟವುಂಟಾಗಿರುವ ಬಗ್ಗೆ ತಹಸೀಲ್ದಾರ್ಗೆ ವರದಿ ನೀಡುವುದಾಗಿ ಭರವಸೆ ನೀಡಿದರು.

Leave a Reply