
ಅಭಿವೃದ್ಧಿ ಕಾಣದ ಸಾರ್ವಜನಿಕ ಸ್ಮಶಾನ
ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮವಾಗಿರುವ ಮಾರಸಿಂಗನಹಳ್ಳಿ ಕುಗ್ರಾಮವಾಗಿದ್ದು, ಮಾರಸಿಂಗನಹಳ್ಳಿ ಗ್ರಾಮದಲ್ಲಿ ಸುಮಾರು 5 ಎಕರೆಗೂ ಹೆಚ್ಚು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸ್ಮಶಾನವಿದ್ದು ಸುಮಾರು ವರ್ಷಗಳಿಂದ ಪರಿಸರ ಸ್ನೇಹಿ ಸ್ಮಶಾನವಾಗಿ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿರುವುದು ಶೋಚನೀಯವಾಗಿದೆ. ಮಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಯನ್ನು ಮಾಡದೆ, ಸಂಸದರ ಶಾಸಕರ ನಿಧಿಯಿಂದ ಅಭಿವೃದ್ಧಿ ಮಾಡಿಸಿಕೊಳ್ಳುವಂತೆ ಬಿಟ್ಟಿ ಸಲಹೆಯನ್ನು ನೀಡಿದ್ದಾರೆ
ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಗರ್ಭಿಣಿಯರಿಗೆ ಡೆಲಿವರಿ ಆಗೋದು ಗ್ಯಾರಂಟಿ
ಮಂಗಲ ಗ್ರಾಮದಿಂದ ಮಾರಸಿಂಗನಹಳ್ಳಿಗೆ ಸಂಪರ್ಕ ಕಲ್ಪಿಸುವ ಸುಮಾರು 4 ಕಿಲೋಮೀಟರ್ ರಸ್ತೆಯಂತೂ ಗುಂಡಿ ಬಿದ್ದು ಹಾಳಾಗಿದೆ ತುರ್ತು ಸಂದರ್ಭದಲ್ಲಿ ಗರ್ಭಿಣಿಯರನ್ನು ವಾಹನಗಳಲ್ಲಿ ಕೂರಿಸಿಕೊಂಡು ತೆರಳಿದರೆ ಡೆಲಿವರಿ ಆಗುವುದಂತೂ ಗ್ಯಾರಂಟಿ ಅಷ್ಟು ಕೆಟ್ಟದ ಮಟ್ಟಿಗೆ ರಸ್ತೆಗಳು ಹಾಳಾಗಿವೆ ಎಂದು ನೋವನ್ನು ವ್ಯಕ್ತಪಡಿಸಿದ್ದಾರೆ.
ಗ್ರಾಮದ ಅಭಿವೃದ್ಧಿಗಾಗಿ ಮತ್ತು ಪರಿಸರ ಸ್ನೇಹಿ ಸ್ಮಶಾನ ಅಭಿವೃದ್ಧಿಗಾಗಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ ತಮ್ಮ ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂಬುದು ಶೋಷಿತ ಸಮುದಾಯ ಗ್ರಾಮಸ್ಥರ ಒತ್ತಾಯವಾಗಿದೆ.

Leave a Reply